ಎರಡು ಪ್ರತ್ಯೇಕ ಅಪಘಾತ : ಇಬ್ಬರು ಸಾವು
ಗುಡಿಬಂಡೆ:
ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ನಂದಿ ಮೆಡಿಕಲ್ ಕಾಲೇಜ್ ಮತ್ತು ಶೆಟ್ಟಿಗೆರೆ ಕ್ರಾಸ್ ಬಳಿ ನಡೆದಿದೆ.
ಮೊದಲನೇ ಘಟನೆಯಲ್ಲಿ ರಾಷ್ಟ್ರೀಯ ಹೆದ್ದಾರಿ44 ರ ನಂದಿ ಮೆಡಿಕಲ್ ಕಾಲೇಜ್ ಬಳಿ ಖಾಸಗಿ ಬಸ್ ಹಾಗೂ ಟಿಪ್ಪರ್ ವಾಹನಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ಟಿಪ್ಪರ್ ಚಾಲಕನನ್ನು ಹಾಗೂ ಬಸ್ ನಲ್ಲಿ ಇದ್ದ ಕೆಲವು ಪ್ರಯಾಣಿಕರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ.

ಎರಡನೇ ಘಟನೆಯಲ್ಲಿ
ಕಾರು ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವು, ಓರ್ವ ಗಂಭೀರ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 44 ರ ಮೆಡಿಕಲ್ ಕಾಲೇಜು ಶೆಟ್ಟಿಗೆರೆ ಕ್ರಾಸ್ ನಡುವೆ ಘಟನೆ ನಡೆದಿದೆ.
ಕಾರಿನಲ್ಲಿ ಇದ್ದ ಪವನ್ ರೆಡ್ಡಿ (26),ರಕ್ಷಿತ ರೆಡ್ಡಿ(23) ಚಿಕಿತ್ಸೆ ಫಲಕಾರಿ ಆಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ರಾಜಶೇಖರ್ ರೆಡ್ಡಿ (30) ಗಂಭೀರ ಗಾಯಗೊಂಡಿದ್ದು ಬೆಂಗಳೂರಿನ ಬಾಬ್ ಟೆಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಂದೇ ಕುಟುಂಬಕ್ಕೆ ಸೇರಿರುವ ಮೃತರು ಹಾಗೂ ಗಾಯಾಳು
ಬೆಂಗಳೂರುನಿಂದ ಅನಂತಪುರಕ್ಕೆ ಕಾರಿನಲ್ಲಿ ಹೋಗುತ್ತಿದ್ದ ಒಂದೇ ಕುಟುಂಬದ ಮೂರು ಜನರು.
ಮುಂದೆ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರು ಜಕ್ಕಂಗೊಂಡಿದೆ.
ಕಾರಿನಲ್ಲಿ ಇದ್ದವರು ಆಂದ್ರಪ್ರದೇಶದ
ಅನಂತಪುರ ಮೂಲದ ಉರುವಕೊಂಡ ಮೂಲದ ಎಂದು ಗುರುತಿಸಲಾಗಿದೆ.
ಮೃತರನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ.
ಸ್ಥಳಕ್ಕೆ ಪೆರೇಸಂದ್ರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
